ಸ್ವಾತಂತ್ರ್ಯ ಅಮೃತ ಮಹೋತ್ಸ: ಮನೆ ಮನೆಗೆ ತೆರಳಿ ಧ್ವಜ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಭಾಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ‌ಜಯನಗರದಲ್ಲಿ ಪಾದಯಾತ್ರೆ ನಡೆಸಿದರು. ಈ ವೇಳೆ, ಜಯನಗರ ಟಿ ಬ್ಲಾಕ್​ನಲ್ಲಿ ಮನೆ ಮನೆಗೆ ತೆರಳಿ ತ್ರಿವರ್ಣ ಧ್ವಜ ನೀಡಿದರು.


ಈ ವೇಳೆ ಶಾಂತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ನಿರ್ಮಲಾ ಸೀತಾರಾಮನ್, ಬಳಿಕ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್, ಮಾಜಿ ಕಾರ್ಪೊರೇಟರ್ ಸಿ.ಕೆ. ರಾಮಮೂರ್ತಿ ಸಾಥ್ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!