ಅ.28ರಿಂದ ಸುರತ್ಕಲ್ ಎನ್‌ಐಟಿಕೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸುರತ್ಕಲ್ ಎನ್‌ಐಟಿಕೆ ಬಳಿ ಟೋಲ್‌ಗೇಟ್ ತೆರವು ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಅ.28ರಿಂದ ಮತ್ತೆ ಅನಿರ್ದಿಷ್ಟಾವಧಿ ಧರಣಿ ಮುಷ್ಕರಕ್ಕೆ ಪಟ್ಟಿಹಿಡಿದಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅವರು ಅ.28ರಿಂದ ನ.3ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಗುರುವಾರ ಆದೇಶಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಭಾರ ಡಿಸಿ ಡಾ.ಕುಮಾರ್ ಅವರು ಮಾತುಕತೆ ನಡೆಸಿದ್ದರು. 15 ದಿನಗಳಲ್ಲಿ ಟೋಲ್‌ಗೇಟ್ ರದ್ದತಿಗೊಳ್ಳಲಿದೆ. ಅಲ್ಲಿವರೆಗೆ ಧರಣಿ ನಡೆಸದೆ ಸಹಕರಿಸುವಂತೆ ಮನವಿ ಮಾಡಿದ್ದರು. ಆದರೆ ಹೋರಾಟಗಾರರು ಧರಣಿ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟುಹಿಡಿದಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳದ 200 ಮೀಟರ್ ಸುತ್ತಮುತ್ತ ಅ.28ರ ಬೆಳಗ್ಗೆ 6ರಿಂದ ನ.3ರ ಸಂಜೆ 6 ಗಂಟೆ ವರೆಗೆ ಸೆ.144ರ ನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!