ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಲಿದೆ.
ಅಂಬಾರಿ ಆನೆ ಅರ್ಜುನನ ಸಾವಿಗೆ ಕಾರಣವಾದ ಕಾಡಾನೆ ಸೆರೆಗೆ ಮಾವುತರ ಪಣ ತೊಟ್ಟಿದ್ದು, ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.
ಬೇಲೂರು ತಾಲೂಕಿನ ಬಿಕ್ಕೋಡು ಆನೆ ಶಿಬಿರಕ್ಕೆ ಸಾಕಾನೆಗಳು ಆಗಮಿಸಿದ್ದು, ಈ ಬಾರಿ ೧೦ ಸಾಕಾನೆಗಳ ಮೂಲಕ ಕಾರ್ಯಾಚರಣೆ ಮಾಡಲಾಗುತ್ತಿದೆ. ಅಭಿಮನ್ಯು ನೇತೃತ್ವದಲ್ಲಿ ಬೇಲೂರಿನಲ್ಲಿ ಕಾರ್ಯಾಚರಣೆ ನಡೆಸಲಾಗುವುದು.
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕಾರ್ಯಾಚರಣೆ ಆರಂಭಕ್ಕೆ ಕಾರಣವಾಗಿದೆ. ಡಿ.೪ರಂದು ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟಿದ್ದು, ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.