ಸುಳ್ಳು, ಲೂಟಿಯ ರಾಜಕೀಯಕ್ಕೆ ಪೂರ್ಣ ವಿರಾಮ: ಆಪ್ ವಿರುದ್ಧ ಯೋಗಿ ಟೀಕಾಸ್ತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ವಿಧಾನಸಭಾ ಚುನಾವಣೆ ಮತ್ತು ಮಿಲ್ಕಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರಮುಖ ಜಯಗಳಿಸಿದ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಜನಾದೇಶವು ಸುಳ್ಳು ಮತ್ತು ಲೂಟಿಯ ರಾಜಕೀಯಕ್ಕೆ ಪೂರ್ಣ ವಿರಾಮ ಹಾಕಿದೆ ಎಂದು ಹೇಳಿದ್ದಾರೆ.

ದೆಹಲಿ ಮತ್ತು ಮಿಲ್ಕಿಪುರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಯೋಗಿ, ಪಕ್ಷದ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಕಾರಣ ಎಂದು ಹೇಳಿದರು.

“ದೆಹಲಿ ವಿಧಾನಸಭಾ ಚುನಾವಣೆ ಮತ್ತು ಮಿಲ್ಕಿಪುರ ಉಪಚುನಾವಣೆಗಳ ಫಲಿತಾಂಶವು ಸುಳ್ಳು ಮತ್ತು ಲೂಟಿಯ ರಾಜಕೀಯಕ್ಕೆ ಪೂರ್ಣವಿರಾಮ ಹಾಕಿದೆ. ಇದು ಕಳೆದ 11 ವರ್ಷಗಳಿಂದ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ವಿಜಯವಾಗಿದೆ. ದೆಹಲಿಯಲ್ಲಿ ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳನ್ನು ನಾನು ಅಭಿನಂದಿಸುತ್ತೇನೆ” ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!