ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಜನೆ, ಪ್ರವಚನಗಳ ಮೂಲಕ ಹಿಂದೂ-ಮುಸ್ಲೀಮರ ನಡುವೆ ಭಾವೈಕ್ಯತೆ ಮೂಡಿಸಿದ ಇಬ್ರಾಹಿಂ ಸುತಾರ ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ.
ಬಾಗಲಕೋಟೆಯ ಮಹಾಲಿಂಗಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಬ್ರಾಹಿಂ ಅವರ ಅಂತ್ಯಕ್ರಿಯ ನಡೆಯಲಿದೆ.
ಇಂದು ಮಧ್ಯಾಹ್ನ ಮಹಾಲಿಂಗಪುರದ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ವೇಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸಂಜೆ 5 ಗಂಟೆಗೆ ಇಬ್ರಾಹಿಂ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.