ಈದ್ಗಾ ಮೈದಾನಕ್ಕೆ ಮತ್ತಷ್ಟು ಭದ್ರತೆ: ಶಾಂತಿ ಕದಡದಂತೆ ಖಾಕಿ ಕಣ್ಗಾವಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಾಮರಾಜ ಪೇಟೆಯ ಈದ್ಗಾ ಮೈದಾನದಲ್ಲಿ ಪೊಲೀಸ್ ಬಂದೋಬಸ್ತ್ ಇನ್ನಷ್ಟು ಹೆಚ್ಚಿಸಲಾಗಿದೆ. ಮೈದಾನ ಕಂದಾಯ ಇಲಾಖೆ ಸ್ವತ್ತು ಎಂಬುದಾಗಿ ಬಿಬಿಎಂಪಿ ಘೋಷಿಸಿದ ಬೆನ್ನಲ್ಲೇ ನಡೆದ ಕೆಲವು ಸಂಭ್ರಮಾಚರಣೆಗಳ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಿಸಿದ ಬೆನ್ನಲ್ಲೇ, ಆ. 15ರಂದು ಈ ಮೈದಾನದಲ್ಲಿ ಧ್ವಜ ಹಾರಿಸುತ್ತೇವೆ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಹೇಳಿತ್ತು. ಅಲ್ಲದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಇಲ್ಲಿ ಆಗಮಿಸಿ ಧ್ವಜಾರೋಹಣ ಮಾಡಲಿ ಎಂದೂ ಹೇಳಿತ್ತು.

ಈ ಎಲ್ಲಾ ಬೆಳವಣಿಗೆಗಳಿಂದ ಮುಸ್ಲಿಂ ಸಮುದಾಯದಿಂದ ಆಕ್ಷೇಪ ವ್ಯಕ್ತವಾಗಿದ್ದು, ಶಾಂತಿ ಕದಡದಂತೆ ಪೊಲೀಸ್ ಕಣ್ಗಾವಲು ಹೆಚ್ಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!