ಬಂಡೀಪುರದಲ್ಲಿ ರಸ್ತೆಗಿಳಿದ ಗಜರಾಜ: ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್‌ ಜಾಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಂಡೀಪುರದಲ್ಲಿ ಒಂಟಿ ಸಲಗವೊಂದು ರಸ್ತೆಗೆ ಇಳಿದ ಪರಿಣಾಮ ಸುಮಾರು 3-4 ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.

ವೀಕೆಂಡ್ ಹಿನ್ನೆಲೆ ತಮಿಳುನಾಡಿನ ಊಟಿ ಮೂಲಕ ಕರ್ನಾಟಕಕ್ಕೆ ಬರುತ್ತಿರುವ ಪ್ರಯಾಣಿಕರು ಗಜರಾಜನ ಕಾಟಕ್ಕೆ ಹೈರಣಾಗಿದ್ದಾರೆ. ರಾತ್ರಿ 9 ಗಂಟೆಗೆ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಇನ್ನೂ ಹೆಚ್ಚಾಗಿದೆ.

ಇತ್ತಿಚೆಗೆ ತರಕಾರಿ ವಾಹನಗಳಿಗಾಗಿ ಗಜರಾಜ ಆಗಾಗ ರಸ್ತೆಗಿಳಿಯುತ್ತಿದ್ದ. ಅದನ್ನೇ ಅಭ್ಯಾಸ ಮಾಡಿಕೊಂಡು ಈಗ ರಸ್ತೆಯಲ್ಲೇ ನಿಂತು ವಾಹನ ಸವಾರರಿಗೆ ಆತಂಕ ಮೂಡಿಸಿದ್ದಾನೆ. ಇದರಿಂದ ಜನ ಹೈರಾಣಾಗಿದ್ದು, ಸುರಕ್ಷಿತವಾಗಿ ಮನೆ ಸೇರಿಕೊಳ್ಳಲು ಹಾತೊರೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!