ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಲಿ ಜನಾರ್ಧನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕರಾಗಿದ್ದ ಜನಾರ್ಧನ ರೆಡ್ಡಿಯನ್ನು 6 ವರ್ಷಗಳ ಅವಧಿಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ,6ರಿಂದ ಅನ್ವಯವಾಗುವಂತೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಅಂದಹಾಗೇ ಸಿಬಿಐ ಕೋರ್ಟ್ ನಿಂದ ಜನಾರ್ಧನ ರೆಡ್ಡಿ ಅವರನ್ನು ಮೈನಿಂಗ್ ಕೇಸಲ್ಲಿ ದೋಷಿ ಎಂಬುದಾಗಿ ಆದೇಶಿಸಿತ್ತು.ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.