ಹೊಸ ದಿಗಂತ ಡಿಜಿಟಿಲ್ ಡೆಸ್ಕ್:
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬುಧವಾರ ಬೆಳಿಗ್ಗೆ ಮಾಜಿ ಸಚಿವ ಬಳ್ಳಾರಿ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ ದೇವರ ದರುಶನ ಪಡೆದರು.
ಜನಾರ್ದನ ರೆಡ್ಡಿ ಅವರ ಪುತ್ರ ಗಾಲಿ ಕಿರೀಟಿ ರೆಡ್ಡಿ , ತೆಲುಗು ನಟಿ ಶ್ರೀಲೀಲಾ ಅವರ ಸಿನಿಮಾ ‘ಜೂನಿಯರ್’ ಜುಲೈ 18 ರಂದು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು ಈ ಹಿನ್ನಲೆಯಲ್ಲಿ ಪ್ರಾರ್ಥಿಸಲು ಕಟೀಲು ದೇಗುಲಕ್ಕೆ ಭೇಟಿ ನೀಡಿದರು.
ಅರ್ಚಕ ಅನಂತ ಆಸ್ರಣ್ಣ ಹಾಗೂ ಶ್ರೀಹರಿ ಆಸ್ರಣ್ಣ ಪ್ರಸಾದ್ ನೀಡಿದರು.
ಅಂದು ಸಚಿವರಾಗಿದ್ದಾಗ ನೀಡಿದ ಅನುದಾನದಲ್ಲಿ ಕಟೀಲಿನಲ್ಲಿ ಯಾತ್ರಿ ನಿವಾಸ ಆಗಿರುವುದನ್ನು ನೆನಪಿಸಿಕೊಂಡ ರೆಡ್ಡಿ ಇಲ್ಲಿ ಚಂಡಿಕಾ ಹೋಮ ಮೊದಲಾದ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿದರು. ಸುತ್ತಲೂ ನಂದಿನಿ ನದಿ ಹರಿಯುತ್ತಿರುವ ಈ ಕ್ಷೇತ್ರ ಮನಸ್ಸಿಗೆ ನೆಮ್ಮದಿ ಕೊಡುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ಜೊತೆಗಿದ್ದರು.