ಗ್ಯಾನವಾಪಿ | ವಝುಖಾನಾದ ಎಎಸ್‌ಐ ಸಮೀಕ್ಷೆ ಕುರಿತು ನಿಮ್ಮ ಪ್ರತಿಕ್ರಿಯೆ ನೀಡಿ: ಮಸೀದಿ ಸಮಿತಿಗೆ ಹೈಕೋರ್ಟ್‌ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ಯಾನವಾಪಿ ಮಸೀದಿ ವಿಚಾರದಲ್ಲಿ ವಾರಣಾಸಿ ಜಿಲ್ಲಾ ಕೋರ್ಟ್‌ ಆವರಣದ ನೆಲಮಾಳಿಗೆಯಲ್ಲಿ ಹಿಂದುಗಳ ಪೂಜೆಗೆ ಅವಕಾಶ ನೀಡಿದ್ದು, ಇದರ ಜೊತೆಗೆ ಅಲಹಾಬಾದ್‌ ಹೈಕೋರ್ಟ್‌ ಕೂಡ ಮಸೀದಿ ಸಮಿತಿಗೆ ಮಹತ್ವದ ಸೂಚನೆ ನೀಡಿದೆ.

ಜ್ಞಾನವಾಪಿ ಮಸೀದಿ ವಝುಖಾನಾದ ಎಎಸ್‌ಐ ಸಮೀಕ್ಷೆ ನಡೆಸುವಂತೆ ಹಿಂದು ಪಕ್ಷವು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದೆ. ಈ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಮಸೀದಿ ಸಮಿತಿಯನ್ನು ಕೇಳಿದೆ. ಅದಲ್ಲದೆ, ಭಾರತೀಯ ಪುರಾತತ್ವ ಇಲಾಖೆ ಮಾಡಿರುವ ಜ್ಞಾನವಾಪಿ ಸಮೀಕ್ಷೆಯ ವರದಿಯು ಪರಿಗಣನೆಗೆ ಯೋಗ್ಯವಾಗಿದೆ ಎಂದು ನ್ಯಾಯಾಲಯವು ತಿಳಿಸಿದೆ.

ಅಲಹಾಬಾದ್ ಹೈಕೋರ್ಟ್ ಬುಧವಾರ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಗೆ (ಮುಸ್ಲಿಂ ಕಡೆ) ನೋಟಿಸ್ ಜಾರಿ ಮಾಡಿದೆ ಮತ್ತು ವುಜುಖಾನಾ ಪ್ರದೇಶದ ಎಎಸ್‌ಐ ಸಮೀಕ್ಷೆಯನ್ನು ಕೋರಿ ಹಿಂದು ಕಡೆಯಿಂದ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

2022 ರ ಶೃಂಗಾರ್ ಗೌರಿ ಮೊಕದ್ದಮೆಯಲ್ಲಿ (ಗ್ಯಾನವಾಪಿ ಮಸೀದಿಯ ಆವರಣದಲ್ಲಿ ಶ್ರೀನಗರ ಗೌರಿಯನ್ನು ಪೂಜಿಸುವ ಹಕ್ಕು ಕೋರಿ) ಮೊದಲ ಫಿರ್ಯಾದಿಯಾಗಿರುವ ರಾಖಿ ಸಿಂಗ್ ಅವರು ಸಲ್ಲಿಸಿದ ಪರಿಷ್ಕರಣೆ ಅರ್ಜಿಯ ಕುರಿತು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಪೀಠ ಇಂದು ನೋಟಿಸ್ ಜಾರಿ ಮಾಡಿದೆ. ಈ ನಡುವೆ ವಾರಣಾಸಿ ಕೋರ್ಟ್‌ ರಾಖಿ ಸಿಂಗ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕಾರ ಮಾಡಿ ಗ್ಯಾನವಾಪಿ ಆವರಣದಲ್ಲಿ ಪೂಜೆ ಮಾಡುವ ಹಕ್ಕನ್ನು ಪಡೆದುಕೊಂಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!