ಉತ್ತರದಲ್ಲಿ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ: ಅಟಲ್‌ ಜೀ ಮಾತನ್ನು ನೆನಪಿಸಿಗೊಂಡ ಅಮಿತ್‌ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಡಾ.ಶಿವಕುಮಾರ ಸ್ವಾಮೀಜಿ ಅಧುನಿಕ ಬಸವಣ್ಣ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.
ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿದ್ದ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅಮಿತ್‌ ಶಾ, ಉತ್ತರದಲ್ಲಿ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ ಎಂದು ಅಟಲ್‌ ಜೀ ಹೇಳಿದ್ದರು ನೆನಪಿಸಿಕೊಂಡರು.
ಡಾ. ಶಿವಕುಮಾರಶ್ರೀಗಳ ಆಶೀರ್ವಾದ ಪಡೆಯಲು ಆಗಮಿಸಿದ್ದೇವೆ. ಸಿದ್ದಗಂಗಾ ಮಠಕ್ಕೆ ನಾನು ಇದುವರೆಗೆ ಮೂರು ಬಾರಿ ಬಂದಿದ್ದೇನೆ. ಹೊಸ ಚೇತನ, ಉತ್ಸಾಹದೊಂದಿಗೆ ಇಲ್ಲಿಂದ ವಾಪಸ್‌ ಹೋಗಿದ್ದೆ. ಇನ್ನು ಬಸವಣ್ಣನವರ ತತ್ವವನ್ನ ಪಸರಿಸಲು ಸ್ವಾಮೀಜಿ ಶ್ರಮಿಸಿದ್ದಾರ’ ಎಂದರು.
ಡಾ.ಶಿವಕುಮಾರ ಸ್ವಾಮೀಜಿ ಅಧುನಿಕ ಬಸವಣ್ಣ. ತ್ರಿವಿಧ ದಾಸೋಹದ ಸಿದ್ಧಾಂತದ ಸಂದೇಶವನ್ನ ಮಠ ಸಾರಿದೆ. ಇಲ್ಲಿಗೆ ಯಾರೇ ಬಂದರೂ ಊಟ ಮಾಡದೆ ವಾಪಸ್‌ ಹೋಗಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!