ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಗಂಗೂಲಿ ಔಟ್: ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮಮತಾ ಬ್ಯಾನರ್ಜಿ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಎರಡನೇ ಅವಧಿಗೆ ವಂಚಿತರಾಗಿರುವುದು ಆಘಾತ ತಂದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಇದೇ ವೇಳೆ ಗಂಗೂಲಿ ಅವರು ಐಸಿಸಿ ಮುಖ್ಯಸ್ಥರ ಚುನಾವಣೆಗೆ ಸ್ಪರ್ಧಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುವುದಾಗಿ ಹೇಳಿದರು.

ಎಲ್ಲಾ ದೇಶವಾಸಿಗಳ ಪರವಾಗಿ ನಾನು ಸೌರವ್ ಗಂಗೂಲಿ ನಮ್ಮ ಹೆಮ್ಮೆ ಎಂದು ಹೇಳುತ್ತೇನೆ. ಸೌರವ್ ಅವರು ಸಮರ್ಥ ಆಡಳಿತಗಾರ ಎಂದು ಸಾಬೀತುಪಡಿಸಿದ್ದಾರೆ. ಅವರಿಗೆ ಅನ್ಯಾಯವಾಗಿದೆ. ಐಸಿಸಿ ಮುಖ್ಯಸ್ಥರ ಚುನಾವಣೆಯಲ್ಲಿ ಗಂಗೂಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ನಾನು ಪ್ರಧಾನಿಗೆ ಮನವಿ ಮಾಡುತ್ತೇನೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!