ಸಿದ್ದರಾಮಯ್ಯ ಕೊರಳಿಗೆ ಉಚಿತ ಬಸ್‌ ಟಿಕೆಟ್‌ಗಳ ಮಾಲೆ, ಸಿಎಂ ಫುಲ್‌ ಖುಷ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾಸನದ ಅರಸೀಕೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಖುಷಿಪಡುವಂಥ ಸನ್ನಿವೇಶವೊಂದು ನಡೆದಿದೆ.

ಕಾಂಗ್ರೆಸ್‌ ತನ್ನ ಗ್ಯಾರೆಂಟಿಗಳ ಬಗ್ಗೆ ಹೆಮ್ಮೆಯಿಂದ ತಲೆ ಎತ್ತುವಂಥ ಮತ್ತೊಂದು ಸಂದರ್ಭ ಬಂದಿದ್ದು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ತನ್ನ ಕೃತಜ್ಞತೆ ಮೆರೆದ ಅಪರೂಪದ ಘಟನೆ ನಡೆಯಿತು.

ಇದರಿಂದ ಖುಷಿಯಾದ ಸಿಎಂ ಸಿದ್ದರಾಮಯ್ಯನವರು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು ಬಹುಶಃ ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಸಿಎಂ ಕಡೆಗೆ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಎಂ. ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!