ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದಲ್ಲಿ ಮುಂದಿನ ವರ್ಷ ಏಪ್ರಿಲ್ 1ರ ನಂತರ ಬಿಪಿಎಲ್ (BPL) ಕುಟುಂಬಗಳಿಗೆ ತಲಾ 500 ರೂಪಾಯಿಯಂತೆ ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ ನೀಡುತ್ತೇವೆ ಎಂದು ಗೆಹ್ಲೋಟ್ ಸರ್ಕಾರ ಘೋಷಣೆ ಮಾಡಿದೆ .
ಬಡತನ ರೇಖೆಗಿಂತ ಕೆಳಗಿರುವ ಮತ್ತು ಉಜ್ವಲ ಯೋಜನೆಗೆ ಅಡಿಯಲ್ಲಿ ಅಡುಗೆ ಅನಿಲ ಪಡೆಯುತ್ತಿರುವ ಜನರಿಗೆ ರಾಜಸ್ಥಾನ ಸರ್ಕಾರ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್ಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ.
ಭಾರತ್ ಜೋಡೋ ಯಾತ್ರೆ ಸದ್ಯ ರಾಜಸ್ತಾನದಲ್ಲಿದ್ದು, ಹೀಗಾಗಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದರು, ಬಿಪಿಎಲ್ ಕುಟುಂಬಗಳಿಗೆ ಅರ್ಧಕ್ಕಿಂತ ಕಡಿಮೆ ಬೆಲೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಸಿಲಿಂಡರ್ಗಳನ್ನು ನೀಡುವುದಾಗಿ ಹೇಳಿದರು.
ನಾನು ಮುಂದಿನ ತಿಂಗಳು ಬಜೆಟ್ಗೆ ಸಿದ್ಧತೆ ನಡೆಸುತ್ತಿದ್ದೇನೆ. ಈ ಸಮಯದಲ್ಲಿ ನಿಮ್ಮ ಮುಂದೆ ಈ ಘೋಷಣೆಯನ್ನು ಇಡುತ್ತಿದ್ದೇನೆ. ಉಜ್ವಲ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ಎಲ್ಪಿಜಿ ಸಂಪರ್ಕಗಳನ್ನು ನೀಡಿದರು. ಆದರೆ ಈಗ ಆ ಸಿಲಿಂಡರ್ ಖಾಲಿಯಾಗಿದೆ, ಏಕೆಂದರೆ ಸಿಲಿಂಡರ್ ದರಗಳು ಈಗ 400ರಿಂದ 1,040 ರೂ.ಗೆ ಹೆಚ್ಚಾಗಿದೆ ಗೆಹ್ಲೋಟ್ ಹೇಳಿದರು. ನಾವು ವರ್ಷಕ್ಕೆ 12 ಸಿಲಿಂಡರ್ಗಳನ್ನು ನೀಡುತ್ತೇವೆ ಗೆಹ್ಲೋಟ್ ಹೇಳಿದರು.