ಹೊಸದಿಗಂತ ವರದಿ ಮೈಸೂರು:
ಗ್ಯಾಸ್ ಸಿಲಿಂಡರ್ ನಿಂದ ಅನಿಲ ಸೋರಿಕೆ ಹಿನ್ನಲೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ಕುಮಾರಸ್ವಾಮಿ (45) ಮಂಜುಳಾ (39) ಅರ್ಚನಾ (19) ಸ್ವಾತಿ (17) ಸಾವನ್ನಪ್ಪಿದ ದುರ್ದೈವಿಗಳು. ಇವರು ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು.
ಸಿಲಿಂಡರ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು
ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.