ದೆಹಲಿಯಲ್ಲಿ ಅನಿಲ ದುರಂತ: 28ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನಿಲ ದುರಂತ ಸಂಭವಿಸಿದೆ.ಇಲ್ಲಿನ ನರೈನಾ ಏರಿಯಾ ಬಳಿ ಇರುವ ಮುನ್ಸಿಪಲ್ ಶಾಲಾ ಬಳಿ ಗ್ಯಾಸ್ ಲೀಕ್‌ ಅನಾಹುತ ಸಂಭವಿಸಿದೆ. ಶಾಲೆಯ 28ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಈ ಪೈಕಿ 19 ವಿದ್ಯಾರ್ಥಿಗಳನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 9 ವಿದ್ಯಾರ್ಥಿಗಳನ್ನು ಆಚಾರ್ಯ ಶ್ರೀ ಭಿಕ್ಷು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲಾ ಅವರಣ ಪಕ್ಕದಲ್ಲೇ ಗ್ಯಾಸ್ ಲೀಕ್ ಆಗಿದೆ. ಈ ಗ್ಯಾಸ್‌‌ ಮಿಶ್ರಿತ ವಾಯು ಸೇವನೆಯಿಂದ ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಇದೀಗ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯಾಧಿಕಾರಿಗಳ ತಂಡ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಮಕ್ಕಳ ಪೋಷಕರು ಆಸ್ಪತ್ರೆ ದೌಡಾಯಿಸಿದ್ದಾರೆ. ಮಕ್ಕಳ ಸುರಕ್ಷತೆ ಕುರಿತು ಶಾಲಾ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಮಕ್ಕಳು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!