ಸಹನಾ ಕಾಂತಬೈಲು ಅವರಿಗೆ ಗೌರಮ್ಮ ದತ್ತಿ ಪ್ರಶಸ್ತಿ

ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಠಿತ ದತ್ತಿನಿಧಿಯಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಈ ಬಾರಿ‌ ‌ಸಹನಾ ಕಾಂತಬೈಲು ಭಾಜನರಾಗಿದ್ದಾರೆ.
ಕಳೆದ (2021-22 ನೇ) ಸಾಲಿನ ಪ್ರಶಸ್ತಿಗಾಗಿ 12 ಲೇಖಕಿಯರು 16 ಕೃತಿಗಳನ್ನು ಪ್ರಸ್ತುತ ಪಡಿಸಿದ್ದು, ಈ ಪುಸ್ತಕಗಳನ್ನು ಪರಾಮರ್ಶಿಸಿದ ಜಿಲ್ಲೆಯ ಮೂವರು ಹಿರಿಯ ಸಾಹಿತಿಗಳು ಸಹನಾ ಕಾಂತಬೈಲು ಆವರ ‘ ‘ಇದು ಬರಿ ಮಣ್ಣಲ್ಲ’ ಲಲಿತ ಪ್ರಬಂಧವನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಕ.ಸಾ.ಪ. ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ.
ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಪಡಿಸಿದ ಉತ್ತಮ ‌ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ
ಹದಿನೆಂಟು ವರ್ಷಗಳ ಹಿಂದೆ ಅಂದಿನ ಅಧ್ಯಕ್ಷರಾಗಿದ್ದ ಟಿ.ಪಿ.ರಮೇಶ್ ಅವರ ಮುತುವರ್ಜಿಯಲ್ಲಿ ಗೌರಮ್ಮ ಅವರ ಪುತ್ರ ಬಿ.ಜಿ.ವಸಂತ ಅವರು ಸ್ಥಾಪಿಸಿದ ಈ ದತ್ತಿ ಪ್ರಶಸ್ತಿಯನ್ನು ಇದುವರೆಗೆ 16 ಲೇಖಕಿಯರಿಗೆ ನೀಡಲಾಗಿದೆ ಎಂದು ಕಾಮತ್ ಅವರು ವಿವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!