ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನು ದುಸ್ಥಿತಿಗೆ ತಂದಿದೆ: ‘ಕೈ’ ನಾಯಕರ ವಿರುದ್ಧ ಸಿ.ಸಿ.ಪಾಟೀಲ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನು ದುಸ್ಥಿತಿಗೆ ತಂದರು ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ.ಪಾಟೀಲ ವಾಗ್ದಾಳಿ ನಡೆಸಿದ್ದಾರೆ.

ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಮಿದುಳು ರೈಲ್ವೆ ಹಳಿ ಇದ್ದಂತೆ. ರೈಲು ಹಳಿ ಪ್ಯಾರಲಲ್‌ನಂತೆ ಕಾಂಗ್ರೆಸ್ ಎಐಸಿಸಿ ವರಿಷ್ಠರು ರೈಲು ಹಳಿ ಇದ್ದಂತೆ. ರಾಷ್ಟ್ರವ್ಯಾಪಿ ನಿಲ್ಲಿಸುತ್ತಿರುವುದು ಕೇವಲ 230 ಸ್ಥಾನಕ್ಕೆ. ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು. ಯಾವ ಪುರುಷಾರ್ಥ, ಯಾವ ಲಾಜಿಕ್ ಮೇಲೆ ಗ್ಯಾರಂಟಿ ಕೊಡ್ತಿದ್ದಾರೆ? ‘I.N.D.I.A’ ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ಸೂರ್ಯ ಪಶ್ಚಿಮಕ್ಕೆ ಹುಟ್ಟಿದಂತೆ.

ದೇಶಕ್ಕೆ ಸಂಕಷ್ಟ ತರುವ ಹೇಳಿಕೆಗಳನ್ನು ನೀಡಬೇಡಿ. ಚುನಾವಣೆಯಲ್ಲಿ ಗೆದ್ದರೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಅವರು ಅಧಿಕಾರಕ್ಕೆ ಬರುವುದಿಲ್ಲ, ಮಾತನಾಡುತ್ತಾರೆ. ಕಾಂಗ್ರೆಸ್‌ನವರು ವಿಚಿತ್ರ ಸನ್ನಿವೇಶದಲ್ಲಿ ಹೊರಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಭವಿಷ್ಯ ನುಡಿದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!