ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ತಡರಾತ್ರಿ ತಮ್ ನಿವಾಸದಲ್ಲಿ 20ಕ್ಕೂ ಹೆಚ್ಚು ಶಾಸಕರನ್ನು ಭೇಟಿ ಮಾಡಿದ್ದು ಎಲ್ಲವೂ ಸರಿಯಾಗಿದೆ ಮತ್ತು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮೇಲೆ ನಂಬಿಕೆಯಿಡಬೇಕು ಎಂದಿದ್ದಾರೆ.
ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಗಾಂಧಿಯವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕರಿಸುವ ಮೂಲಕ ಗೆಹ್ಲೋಟ್ರಿಂದ ಸಚಿನ್ ಪೈಲಟ್ಗೆ ಅಧಿಕಾರ ಹಸ್ತಾಂತರವನ್ನು ವಾಸ್ತವಿಕವಾಗಿ ಔಪಚಾರಿಕಗೊಳಿಸಲು ನಡೆಯಬೇಕಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯ ಎರಡು ದಿನಗಳ ನಂತರ ಈ ಸಭೆ ನಡೆದಿದೆ ಎಂದು ಮೂಲಗಳು ವರದಿ ಮಾಡಿವೆ.
ಲಭ್ಯವಿರುವ ಮಾಹಿತಿಯ ಪ್ರಕಾರ ಗೆಹ್ಲೋಟ್ ಅವರನ್ನು ಭೇಟಿಯಾದ ಶಾಸಕರಲ್ಲಿ ಒಬ್ಬರು ಪ್ರತಿಕ್ರಿಯಿಸಿದ್ದು ಇದು ಯೋಜಿತ ಭೇಟಿಯಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬ ಶಾಸಕರು ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದು ಭಾನುವಾರ ನಡೆದ ಘಟನೆಗಳನ್ನು ದುರದೃಷ್ಟಕರ ಎಂದಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಕಾರ್ಯಕರ್ತರು ಉತ್ಸುಕರಾಗಿದ್ದಾಗ ಅದು ಅವರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಅಲ್ಲದೇ ಚುನಾವಣೆಗೆ ಒಂದು ವರ್ಷ ಇರುವಾಗಲೇ ನಾಯಕರು ಸಾರ್ವಜನಿಕವಾಗಿ ಪರಸ್ಪರ ಮೂಲೆಗುಂಪಾಗುತ್ತಿದ್ದಾರೆ. ನಾಯಕತ್ವವು ಸಂಖ್ಯೆಯನ್ನು ನೋಡಬೇಕು ಎಂದು ಅವರು ಹೇಳಿದ್ದಾರೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.
ಇವೆಲ್ಲದರ ನಡುವೆ ಪೈಲಟ್ ಮಂಗಳವಾರ ಪ್ರತ್ಯೇಕವಾಗಿ ನವದೆಹಲಿಗೆ ತೆರಳಿದ್ದು, ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.