ಕೇಜ್ರಿವಾಲ್‌ ಬಂಧನಕ್ಕೆ ಜರ್ಮನಿ ಸರ್ಕಾರ ಆಕ್ಷೇಪ: ಜರ್ಮನಿ ರಾಯಭಾರಿ ವಿರುದ್ಧ ಭಾರತ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಜರ್ಮನಿ ಸರ್ಕಾರ ಮಾತನಾಡಿದೆ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿರುವುದರಿಂದ, ಕೇಜ್ರಿವಾಲ್ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆಯನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಜರ್ಮನ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದು ಭಾರತ ಸರ್ಕಾರದ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಭಾರತದ ವಿದೇಶಾಂಗ ಸಚಿವಾಲಯವು ದೆಹಲಿಯಲ್ಲಿರುವ ಜರ್ಮನ್ ರಾಯಭಾರಿ ಜಾರ್ಜ್ ಎಂಜ್‌ವೀಲರ್ ಅವರನ್ನು ಕರೆಸಿ, ಇದು ಭಾರತದ ಆಂತರಿಕ ವ್ಯವಹಾರಗಳಲ್ಲಿ ಸ್ಪಷ್ಟ ಹಸ್ತಕ್ಷೇಪವಾಗಿದೆ ಎಂದು ಹೇಳಿದೆ.

ಇತರ ದೇಶಗಳಂತೆ ಭಾರತದಲ್ಲಿಯೂ ಆರೋಪಿಗಳನ್ನು ನ್ಯಾಯಾಂಗ ಪ್ರಕ್ರಿಯೆಯ ಪ್ರಕಾರ ವಿಚಾರಣೆ ಮಾಡಲಾಗುತ್ತದೆ. ಆದರೆ ಅದನ್ನು ಪಕ್ಷಪಾತದಿಂದ ನೋಡಬಾರದು ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!