ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜನಸಾಮಾನ್ಯರಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡಲು ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕೋವಿಡ್ ಚಿಕಿತ್ಸೆ ಮತ್ತು ಲಸಿಕೆ, ಸೋಂಕು ನಿಯಂತ್ರಣಕ್ಕಾಗಿ ಪಿಎಂ ಕೇರ್ಸ್ ನಿಧಿಗೆ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಈ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕು ಎಂದು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗೆ 250 ರೂ. ಶುಲ್ಕ ನಿಗದಿಪಡಿಸಿರುವುದರಿಂದ ಶೇಕಡ 70 ರಷ್ಟು ಇರುವ ಬಡಜನ ಲಸಿಕೆ ಪಡೆಯಲು ಹಿಂಜರಿಯುವಂತಾಗಿದೆ. ಇದರಿಂದಾಗಿ ಕೋವಿಡ್ ವಿರುದ್ಧದ ಸಮರಕ್ಕೆ ಹಿನ್ನಡೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಭಾರತದಲ್ಲಿ ಎರಡು ಕೋರೋನಾ ಲಸಿಕೆವಿದ್ದರೂ ರೀಕ್ಷಿತ ಯಶಸ್ಸು ಸಿಕ್ಕಿಲ್ಲ. ದೇಶದಲ್ಲಿ ಇದುವರೆಗೆ 0.5 ರಷ್ಟು ಜನಸಂಖ್ಯೆಗಷ್ಟೇ ಲಸಿಕೆ ನೀಡಿರುವುದು ವಿಷಾದನೀಯ. ಜೊತೆಗೆ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷಿಸಿದರೆ ಅನಾಹುತವಾದೀತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಪ್ರಧಾನಿ @narendramodi ಅವರು ವ್ಯವಸ್ಥೆ ಕಲ್ಪಿಸಬೇಕು.
ಕೋವಿಡ್ ಚಿಕಿತ್ಸೆ ಮತ್ತು ಲಸಿಕೆ ನಿಯಂತ್ರಣಕ್ಕಾಗಿಯೇ ಪಿ.ಎಂ ಕೇರ್ಸ್ ನಿಧಿಗೆ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಆ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕು. 1/4 pic.twitter.com/V2h33bJVAS— Siddaramaiah (@siddaramaiah) March 5, 2021