ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಆದೇಶ ತಿರಸ್ಕರಿಸಿ ಪಾದಯಾತ್ರೆ ನಡೆಸಿದರೆ ಬಂಧಿಸಬೇಕಾಗುತ್ತದೆ ಎಂದು ರಾಮನಗರ ಎಸ್ಪಿ ಗಿರೀಶ್ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಎಚ್ಚರಿಸಿದ್ದಾರೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೊರೋನಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಐದನೇ ದಿನದ ಪಾದಯಾತ್ರೆಗೆ ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಜನ ಜಮಾಯಿಸಿದ್ದು, ಈ ವೇಳೆ ಸಿದ್ದರಾಮಯ್ಯಗೆ ಎಸ್ಪಿ ಎಚ್ಚರಿಕೆ ನೀಡಿದ್ದಾರೆ. ಪಾದಯಾತ್ರೆ ನಿಲ್ಲಿಸುವಂತೆ ಸಿದ್ದರಾಮಯ್ಯಗೆ ನೊಟೀಸ್ ನೀಡಿದ್ದು, ಉಲ್ಲಂಘನೆಯಾದರೆ ಬಂಧಿಸಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.