ನಮಗೆ ಸಮರ್ಪಕ ನೀರು ಬಿಡಿ: ಸಿಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಎಡೆ ಇಟ್ಟು ತಮಿಳುನಾಡು ರೈತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾವೇರಿ ನೀರಿಗಾಗಿ ಕರ್ನಾಟಕದಲ್ಲಿ ಆಕ್ರೋಶ ಹೆಚ್ಚುತ್ತಿದ್ದು, ಇಂದು ಬೆಂಗಳೂರು ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅತ್ತ ತಮಿಳುನಾಡಿನಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಸಮಪರ್ಕವಾಗಿ ನೀರು ಬಿಡುತ್ತಿಲ್ಲ, ತಕ್ಷಣವೇ ನಮ್ಮ ಪಾಲಿನ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮಿಳುನಾಡು ರೈತರು ನಮ್ಮ ಪಾಲಿನ ನೀರು ಬಿಟ್ಟುಬಿಡಿ. ಕರ್ನಾಟಕ ಇದುವರೆಗೆ ಶೇಕಡಾ 30 ರಷ್ಟು ಮಾತ್ರ ನೀರು ಹರಿಸಿದೆ. ಇನ್ನೂ ಶೇಕಡಾ 70 ರಷ್ಟು ನೀರು ಹರಿಸದೆ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದೆ. ಇಷ್ಟೇ ಅಲ್ಲ ತಮಿಳುನಾಡಿನ ರೈತರು ಕರ್ನಾಟಕ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಎಡೆಇಟ್ಟು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುಷ್ಪನಮನ ಸಲ್ಲಿಸಿ ಕಾವೇರಿ ನದಿ ನೀರು ಹರಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಂಪೂರ್ಣ ಬೆಂಗಳೂರು ಬಂದ್ ನಡೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!