ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್ಕೌಂಟರ್ ಆಗಿದೆ, ಜೀವವೂ ಹೋಗಿದೆ. ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ. ಸರೆಂಡರ್ ಕೊಡೋ ಪರಿಹಾರ ನಮಗೂ ಕೊಡಿ ಎಂದು ಮೃತ ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡ ಸಹೋದರಿ ಸುಗುಣ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ನಕ್ಸಲ್ ಶರಣಾಗತಿ ವಿಚಾರ ಚರ್ಚೆಯಲ್ಲಿರುವ ಸಂದರ್ಭ ಇತ್ತೀಚೆಗೆ ಎನ್ಕೌಂಟರ್ಗೆ ಬಲಿಯಾದ ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡ ಸಹೋದರಿ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ, ಪರಿಹಾರ ಆದ್ರೂ ನೀಡಿ ಅಂತ ಮನವಿ ಮಾಡಿದ್ದಾರೆ.