ಜ್ಞಾನವಾಪಿ ಸಮೀಕ್ಷೆ: ನವೆಂಬರ್ 17 ರವರೆಗೆ ವರದಿ ಸಲ್ಲಿಸಲು ಸಮಯ ನೀಡಿದ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ನವೆಂಬರ್ 17 ರವರೆಗೆ ವರದಿಯನ್ನು ಸಲ್ಲಿಸಲು ವಾರಣಾಸಿ ನ್ಯಾಯಾಲಯವು ಗುರುವಾರ ASI ಗೆ ಹೆಚ್ಚುವರಿ ಸಮಯವನ್ನು ನೀಡಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಮನವಿಯನ್ನು ಸ್ವೀಕರಿಸಿ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು ಆದೇಶ ಹೊರಡಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಕೀಲ ಅಮಿತ್ ಶ್ರೀವಾಸ್ತವ ತಿಳಿಸಿದ್ದಾರೆ.

ಎಎಸ್‌ಐ ತನ್ನ ಸಮೀಕ್ಷೆಯನ್ನು ಪೂರ್ಣಗೊಳಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿ ಸಿದ್ದು, ಆದರೆ ಸಮೀಕ್ಷೆ ಕಾರ್ಯದಲ್ಲಿ ಬಳಸಲಾದ ಸಲಕರಣೆಗಳ ವಿವರಗಳೊಂದಿಗೆ ವರದಿಯನ್ನು ಕಂಪೈಲ್ ಮಾಡಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಮತ್ತು ಹೆಚ್ಚುವರಿ ಸಮಯವನ್ನು ಕೋರಲಾಗಿದೆ ಎಂದು ಶ್ರೀವಾಸ್ತವ ಹೇಳಿದರು.

ಅಕ್ಟೋಬರ್ 5 ರಂದು, ನ್ಯಾಯಾಲಯವು ಎಎಸ್‌ಐಗೆ ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಿತು ಮತ್ತು ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!