ಇಂದು ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಾ ಜ್ಞಾನವಾಪಿ ಸಮೀಕ್ಷಾ ವರದಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸಿದ ಜ್ಞಾನವಾಪಿ ಸಮೀಕ್ಷಾ ವರದಿ ಇಂದು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

ಜಿಲ್ಲಾ ನ್ಯಾಯಾಧೀಶ ಡಾ. ಅಜಯ್ ಕೃಷ್ಣ ವಿಶ್ವೇಶ್ ಅವರ ಆದೇಶದ ಮೇರೆಗೆ ಎಎಸ್‌ಐ ಜ್ಞಾನವಾಪಿ ಕಟ್ಟಡದವರಣದಲ್ಲಿ ಜು.24ರಂದು ಸರ್ವೆ ಕಾರ್ಯ ಆರಂಭಿಸಲಾಗಿದ್ದು, ನ.2ರಂದು ಸರ್ವೆ ಪೂರ್ಣಗೊಂಡಿತ್ತು. ಡಿ.11 ರಂದು ವರದಿ ಸಲ್ಲಿಸಬೇಕಿತ್ತಾದರೂ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಅವಿನಾಶ್ ಮೊಹಾಂತಿ ಅವರ ಆರೋಗ್ಯ ಸಂಬಂಧಿ ಸಮಸ್ಯೆಗಳ ಹಿನ್ನೆಲೆಯಲ್ಲಿ ವರದಿ ಸಲ್ಲಿಕೆ ಸಾಧ್ಯವಾಗಿರಲಿಲ್ಲ. ಇದನ್ನು ಪರಿಗಣಿಸಿ ನ್ಯಾಯಾಲಯ ಒಂದು  ವಾರದ ಸಮಯ ನೀಡಿತ್ತು.

ಈಗಾಗಲೇ ನ್ಯಾಯಾಲಯವು ವರದಿ ಸಲ್ಲಿಸಲು ವಿವಿಧ ಹಂತದಲ್ಲಿ ನಾಲ್ಕು ಬಾರಿ ಹೆಚ್ಚುವರಿ ಸಮಯವನ್ನು ನೀಡಿದೆ. ಇಂದು ಈ ವರದಿ ಸಲ್ಲಿಕೆಯಾಗಬೇಕಿದ್ದು, ವರದಿ ಸಲ್ಲಿಕೆಯಾಗುತ್ತದೆಯೇ? ಮತ್ತೊಮ್ಮೆ ಹೆಚ್ಚುವರಿ ಕಾಲಾವಕಾಶ ಕೋರಲಾಗುತ್ತದೆಯೇ ಎಂಬುದು ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!