ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಜಾಲತಾಣ ಲೋಕಾರ್ಪಣೆಗೊಳಿಸಿದ ಗೋವಾ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋವಾ ಫೊಂಡಾದ ಫರ್ಮಾಗುಡಿಯಲ್ಲಿ ಮೇ 17 ರಿಂದ 19 ವರೆಗೆ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ 83 ನೆಯ ಜನ್ಮೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ವರ್ಷದ ಪ್ರಯುಕ್ತ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ನಡೆಯಲಿದೆ.

ಕಾರ್ಯಕ್ರಮ ಪ್ರಯುಕ್ತ ಗೋವಾ ಸಿಎಂ ಪ್ರಮೋದ ಸಾವಂತ ಅವರು ಮುಖ್ಯಮಂತ್ರಿ ಕಾರ್ಯಾಲಯದಲ್ಲಿ https://SanatanRashtraShankhnad.in ಈ ಇಂಗ್ಲಿಷ್ ಭಾಷೆಯಲ್ಲಿನ ಜಾಲತಾಣದ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಸ್ವಾಗತ ಸಮಿತಿಯ ಪೃಥ್ವಿರಾಜ ಹಜಾರೆ, ರಾಷ್ಟ್ರೀಯ ವಕ್ತಾರ ಚೇತನ ರಾಜಹಂಸ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಮೇಶ ಶಿಂಧೆ ಹಾಗೂ ಮಧುಸೂದನ ಕುಲಕರ್ಣಿ ಮತ್ತು ನ್ಯಾಯವಾದಿ ರಾಜೇಶ್ ಗಾವಕಾರ ಇವರೆಲ್ಲರೂ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!