ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವಿಯ ದರುಶನ ಪಡೆದಿದ್ದಾರೆ.
ಉಡುಪಿ ಪ್ರವಾಸವನ್ನು ಕೈಗೊಂಡಿದ್ದ ಅವರು, ಹೆಲಿಕಾಫ್ಟರ್ ವಿಮಾನವನ್ನು ಬಿಟ್ಟು ಸರಳವಾಗಿ ರೈಲಿನ ಮೂಲಕ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದರು. ಸಾವಂತ್ ಅವರನ್ನು ಶಾಸಕ ಗುರುರಾಜ್ ಗಂಟಿಹೊಳೆ ಬರಮಾಡಿಕೊಂಡರು.
ಸ್ವಲ್ಪ ಕಾಲ ವಿಶ್ರಾಂತಿ ಪಡೆದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಮೂಕಾಂಬಿಕೆಯ ದರುಶನ ಪಡೆದಿದ್ದಾರೆ. ಬಳಿಕ ಚಂಡಿಕಾ ಹೋಮದಲ್ಲಿ ಭಾಗಿಯಾಗಿ, ವಿಶೇಷ ಪೂಜೆ ನೆರವೇರಿಸಿ ಗೋವಾಕ್ಕೆ ವಾಪಸ್ ಆಗಿದ್ದಾರೆ.