ಚಿನ್ನಕಳ್ಳ ಸಾಗಣೆ ಪ್ರಕರಣ: ತರುಣ್ ರಾಜು ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಕಳ್ಳ ಸಾಗಣೆ ಪ್ರಕರಣದಲ್ಲಿ,ರನ್ಯಾ ರಾವ್ ಜೊತೆ ಎರಡನೇ ಆರೋಪಿಯಾಗಿರುವ ತರುಣ್ ರಾಜು ಸಲ್ಲಿಸಿದ್ದ ನಿಯಮಿತ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), 2023 ರ ಸೆಕ್ಷನ್ 483 ರ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು, ಆದರೆ ಸೆಷನ್ಸ್ ನ್ಯಾಯಾಲಯವು ಮ್ಯಾಜಿಸ್ಟ್ರೇಟ್ ತೀರ್ಪನ್ನು ಬದಲಾಯಿಸಲು ಯಾವುದೇ ಆಧಾರವಿಲ್ಲ ಎಂದು ಹೇಳಿದೆ. ಹೀಗಾಗಿ ಉನ್ನತ ಮಟ್ಟದ ಕಳ್ಳಸಾಗಣೆ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗ ತರುಣ್ ರಾಜು ನ್ಯಾಯಾಂಗ ಬಂಧನದಲ್ಲಿಯೇ ಇರುತ್ತಾರೆ.

ಪ್ರಕರಣದಲ್ಲಿ ತರುಣ್ ರಾಜು ಅವರನ್ನು ಎ2 ಎಂದು ಪಟ್ಟಿ ಮಾಡಲಾಗಿದೆ, ರನ್ಯಾ ರಾವ್ ನನ್ನು ಎ1 (ಮೊದಲ ಆರೋಪಿ) ಮತ್ತು ಸಾಹಿಲ್ ಜೈನ್ ನನ್ನು ಎ3 (ಮೂರನೇ ಆರೋಪಿ) ಎಂದು ಪಟ್ಟಿ ಮಾಡಲಾಗಿದೆ. ಮೂವರೂ ಬಂಧನದಲ್ಲಿದ್ದಾರೆ, ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 21 ರವರೆಗೆ ವಿಸ್ತರಿಸಲಾಗಿದೆ.

ಚಿನ್ನ ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಮಾರ್ಚ್ 11 ರಂದು ರಾಜು ನನ್ನು ಬಂಧಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!