ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ರನ್ಯಾ ರಾವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್​ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ ಮೆಟ್ಟಿಲು ಏರಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್​ ಪರಪ್ಪನ ಅಗ್ರಹಾದಲ್ಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!