ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ವನ್ನು ತಲುಪಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂವಾದ ನಡೆಸಿದ್ದಾರೆ.
ಸುಮಾರು 18 ನಿಮಿಷಗಳ ಕಾಲ ಮಾತುಕತೆ ನಡೆಸಿದ ಪ್ರಧಾನಿ ಮೋದಿ-ಶುಕ್ಲಾ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.
ಇಂದು, ನೀವು ನಮ್ಮ ತಾಯ್ನಾಡಿನಿಂದ ದೂರವಾಗಿದ್ದೀರಿ, ಆದರೆ ನೀವು ಭಾರತೀಯರ ಹೃದಯಕ್ಕೆ ಹತ್ತಿರವಾಗಿದ್ದೀರಿ. ನನ್ನ ಮಾತಿನ ಜೊತೆಗೆ 140 ಕೋಟಿ ಭಾರತೀಯರ ಭಾವನೆ ಇದೆ. ಅವರ ಉತ್ಸಾಹ ಮತ್ತು ಕುತೂಹಲವೂ ಇದೆ ಎಂದು ಹೇಳಿದರು. ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಶುಕ್ಲಾ, ದೇಶದ ಜನರು ಪ್ರೀತಿ, ಆರ್ಶಿವಾದದಿಂದ ನಾನು ಚೆನ್ನಾಗಿದ್ದೇನೆ. ಈ ಬಾಹ್ಯಕಾಶ ಯಾತ್ರೆ ನನ್ನದಲ್ಲ, ನನ್ನ ದೇಶದು. ನಿಮ್ಮ ನೇತೃತ್ವದ ಸರ್ಕಾರ ಕನಸುಗಳನ್ನು ಸಹಕಾರ ನೀಡಲು ಅವಕಾಶ ನೀಡುತ್ತದೆ ಎಂದು ಹೇಳಿದರು.
“ಆಪ್ಕೆ ನಾಮ್ ಮೇ ಭಿ ಶುಭ ಹೈ ಔರ್ ಆಪ್ಕಿ ಯಾತ್ರ ನಯೇ ಯುಗ್ ಕಾ ಶುಭರಂಭ್ ಭಿ ಹೈ (ನಿಮ್ಮ ಹೆಸರಿನ ಅರ್ಥವೇ ಶುಭ ಮತ್ತು ನಿಮ್ಮ ಪ್ರಯಾಣವು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ) ಎಂದು ಮೋದಿ ಹೇಳಿದರು.
1984 ರಲ್ಲಿ ರಷ್ಯಾದ ಬಾಹ್ಯಾಕಾಶ ನೌಕೆಯಲ್ಲಿ ಹಾರಿದ ರಾಕೇಶ್ ಶರ್ಮಾ ಅವರ ನಂತರ 41 ವರ್ಷಗಳಲ್ಲಿ ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದರು.
ಕಳೆದ ಜೂನ್ 25ರಂದು ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಇತರ ಮೂವರು ಗಗನಯಾತ್ರಿಗಳ ಜೊತೆ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್ಎಕ್ಸ್ನ ಡ್ರ್ಯಾಗನ್ ಕ್ಯಾಪ್ಸುಲ್ನಲ್ಲಿ ಬಾಹ್ಯಾಕಾಶಕ್ಕೆ ಹಾರಿದ್ದರು. ಈ ಮೂಲಕ 40 ವರ್ಷಗಳ ನಂತರ ಬಾಹ್ಯಾಕಾಶಕ್ಕೆ ಹಾರಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಗೌರವಕ್ಕೆ ಶುಭಾಂಶು ಶುಕ್ಲಾ ಪಾತ್ರರಾಗಿದ್ದಾರೆ.