ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲಾಗುತ್ತದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು. ಎಣ್ಣೆ, ಬೇಳೆ, ಕಾಳು ಒಳಗೊಂಡ ದಿನಸಿ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.
ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ.