ಭವಾನಿ ರೇವಣ್ಣಗೆ ಗುಡ್ ನ್ಯೂಸ್: ಹಾಸನ, ಮೈಸೂರು ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣಗೆ ಜಾಮೀನು ಷರತ್ತು ಸಡಿಲಿಕೆ ನೀಡಿ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಭೇಟಿಗೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ 15 ದಿನಗಳ ಕಾಲ ಹಾಸನ, ಮೈಸೂರು ಭೇಟಿಗೆ ಅವಕಾಶ ಮಾಡಿಕೊಟ್ಟಿದೆ. ಸಾಕ್ಷಿಗಳ ಭೇಟಿ ಸೇರಿ ಜಾಮೀನು ಷರತ್ತು ಉಲ್ಲಂಘಿಸಬಾರದು. ಉಲ್ಲಂಘಿಸಿದ್ರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಸದ್ಯ ಅರ್ಜಿಯ ವಿಚಾರಣೆಯನ್ನು ಜನವರಿ 9 ಕ್ಕೆ ನಿಗದಿಪಡಿಸಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!