ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರತಿಷ್ಟಿತ ಶಾಲೆಗಳಲ್ಲಿ ಸಿಗಲಿದೆ ಪ್ರವೇಶಾವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಶೀಘ್ರವೇ ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾವಕಾಶ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಸ್ಮಶಾನ ಕಾರ್ಮಿಕರಿಗೆ ವಸತಿ ಯೋಜನೆ, ಅವರ ಮಕ್ಕಳಿಗೆ ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವ ಮತ್ತು ಪಡಿತರ ವಿತರಣೆ ಸಂಬಂಧ ಯೋಜನೆ ರೂಪಿಸಲಿದ್ದೇವೆ ಎಂದರು .
ಪ್ರತಿಷ್ಟಿತ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಯೋಜನೆಯಲ್ಲಿ ಅಲೆಮಾರಿ, ದೇವದಾಸಿಯರ ಮಕ್ಕಳು, ಪೋಷಕರು ಮೃತರಾಗಿ ಅನಾಥರಾದ ಮಕ್ಕಳು , ಅಂಗವಿಕಲ ಮಕ್ಕಳು ಸೇರಿ 14 ವಿಧದ ಒಂದು ಸಾವಿರ ಮಕ್ಕಳನ್ನು ಪ್ರತಿವರ್ಷ ಓದಿಸುವ ಯೋಜನೆ ಇದಾಗಿದೆ. ಇದಕ್ಕೆ ಸ್ಮಶಾನ ಕಾರ್ಮಿಕರ ಮಕ್ಕಳು ಕೂಡ ಸೇರಲಿದ್ದಾರೆ. ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಆದ್ಯತೆ ನೀಡಿ ಸರ್ಕಾರಿ ಆದೇಶ ಹೊರಡಿಸಲಾಗುತ್ತದೆ. ಪ್ರವೇಶ ಸಂಖ್ಯೆಯನ್ನು 1000 ದಿಂದ 2000 ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!