ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ : ಕಂದಾಯ ಇಲಾಖೆಯಿಂದ ಹಲವು ಯೋಜನೆ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರೈತರಿಗಾಗಿ ಕಂದಾಯ ಇಲಾಖೆಯಿಂದ ಹಲವು ಯೋಜನೆ ಜಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.  ಅಶೋಕ್ ಹೇಳಿದ್ದಾರೆ.

ನಗರದ ಜಿಕೆವಿಕೆ ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಚಿವರು, ರೈತರಿಗಾಗಿ ಕಂದಾಯ ಇಲಾಖೆಯಿಂದ ಹಲವು ಯೋಜನೆ ಜಾರಿ ಮಾಡಲಾಗಿದೆ, ರೈತರ ಮನೆ ಬಾಗಿಲಿಗೆ ಪಿಂಚಣಿಯನ್ನು 74 ಗಂಟೆಗಳಲ್ಲಿ ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ರೈತರ ಅಕ್ರಮ ಜಮೀನನ್ನು ಸಕ್ರಮ ಮಾಡುವ ಕೆಲಸ ಮಾಡುತ್ತಿದ್ದೇವೆ. ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಕಾಫಿ ಬೆಳೆಗಾರರಿದ್ದಾರೆ, ಕಾಫಿ ಬೆಳೆಗಾರರಿಗೆ ಸರ್ಕಾರಿ ಜಮೀನು ಲೀಜ್ ಗೆ ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!