ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂದಿನಿ ಹಾಲಿನ ದರ ಏರಿಕೆಯ ಶಾಕ್ ಇದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹಾಲಿನ ದರ ಏರಿಕ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದರಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ಬಳಿಕ ಹಾಲು ಒಕ್ಕೂಟ ಹಾಲಿನ ದರ ಏರಿಕೆಗೆ ಬ್ರೇಕ್ ಹಾಕಿದೆ.
ಆದರೆ ತಿಂಗಳ ಅಂತ್ಯದಲ್ಲಿ ಗ್ರಾಹಕರಿಗೆ ಮತ್ತೆ ಶಾಕ್ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಕರ್ನಾಟಕ ಹಾಲು ಒಕ್ಕೂಟ ಸ್ಪಷ್ಟಪಡಿಸಿದೆ.