ರಾಮಭಕ್ತರಿಗೆ ಇನ್ನಷ್ಟು ಸೌಲಭ್ಯ: ನೋಯ್ಡಾದಿಂದ ಅಯೋಧ್ಯೆಗೆ ನೇರ ಬಸ್ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆ ಪ್ರಭು ಶ್ರೀರಾಮಚಂದ್ರನ ಮಂದಿರ ಉದ್ಘಾಟನೆ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಇನ್ನಷ್ಟು ಕಳೆ ತರಲು ನಿರ್ಧರಿಸಿದೆ.

ನೋಯ್ಡಾದಿಂದ ಅಯೋಧ್ಯೆಗೆ ನೇರ ಬಸ್ ಸೇವೆ ಒದಗಿಸಲು ಯೋಗಿ ನೇತೃತ್ವದ ಸರ್ಕಾರ ಸಜ್ಜಾಗುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನೊಯ್ಡಾ ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ ಎನ್.ಪಿ. ಸಿಂಗ್, ಸದ್ಯ ನೋಯ್ಡಾ ಡಿಪೋದಿಂದ ಅಯೋಧ್ಯೆಗೆ ನೇರ ಬಸ್‌ಗಳಿಲ್ಲ. ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ನೋಯ್ಡಾ ಡಿಪೋ ಶೀಘ್ರದಲ್ಲೇ ಅಯೋಧ್ಯೆಗೆ ಡೈರೆಕ್ಟ್ ಬಸ್‌ಗಳನ್ನು ಪ್ರಾರಂಭಿಸಲಿದೆ. ನೋಯ್ಡಾದಿಂದ ಅಯೋಧ್ಯೆಗೆ ಸುಮಾರು 650 ಕಿಮೀ ದೂರವಿದೆ. ಈ ಸಂದರ್ಭದಲ್ಲಿ ನೋಯ್ಡಾ ಡಿಪೋ ಲಕ್ನೋದಲ್ಲಿ ಸಿಎನ್‌ಜಿ (ಗ್ಯಾಸ್) ತುಂಬುವ ಸೌಲಭ್ಯವನ್ನು ಒದಗಿಸಲಾಗುವುದು ಎಂದಿದ್ದಾರೆ.

ಬಸ್ ಟಿಕೆಟ್ ದರ ಅಂತಿಮಗೊಂಡಿಲ್ಲ. ಲಕ್ನೋದ ಕೇಂದ್ರ ಕಚೇರಿಯಿಂದ ನಿರ್ದೇಶನಗಳನ್ನು ಸ್ವೀಕರಿಸಿದ್ದೇವೆ. ಬೇಡಿಕೆ ಹೆಚ್ಚಾದರೆ ಹೆಚ್ಚಿನ ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!