ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ಸರಕಾರ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದ್ದು, 380 ರೂಪಾಯಿ ಇದ್ದ ದಿನ ಭತ್ಯೆವನ್ನ 600 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕುರಿತು ಪ್ರತಿಕ್ರಿಯಿಸಿದ್ದು, 380 ರೂಪಾಯಿ ಇದ್ದ ದಿನ ಭತ್ಯೆ 600 ರೂಪಾಯಿಗೆ ಏರಿಸಿದ್ದೇವೆ. ಇನ್ನು ವಿಶೇಷ ತರಬೇತಿ ವಿಭಾಗ ತೆರೆಯಬೇಕೆಂಬುದು ನಮ್ಮ ಉದ್ದೇಶ. ಅಗ್ನಿಶಾಮಕ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯಗಳನ್ನ ಒದಗಿಸುತ್ತಿದ್ದೇವೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತ್ಯೇಕ ತರಬೇತಿ ನೀಡ್ತಿದ್ದೇವೆ. ಅಗ್ನಿಶಾಮಕ ಠಾಣೆ, ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯೇಕ ತರಬೇತಿ ನೀಡುತ್ತಿದ್ದೇವ’ ಎಂದರು.