ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್ಗಳನ್ನು ತೆರೆಯಲು ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
1 ಗಂಟೆವರೆಗೆ ವ್ಯಾಪಾರ ನಡೆಸಲು ಅನುಮತಿ ಇದ್ದರೂ, ಪೊಲೀಸರು ರಾತ್ರಿ 10 ಗಂಟೆಗೆಲ್ಲ ಹೋಟೆಲ್ಗಳನ್ನು ಬಂದ್ ಮಾಡಿಸುತ್ತಿದ್ದರು.
ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 1 ಗಂಟೆವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರವನ್ನು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ತಿಳಿಸಿ ಹೋಟೆಲ್ಗಳಿಗೆ ತೊಂದರೆ ನೀಡದಂತೆ ನೋಡಿಕೊಳ್ಳುವಂತೆ ಡಿಸಿಪಿಗಳಿಗೆ ಆಯುಕ್ತರು ಸೂಚಿಸಿದ್ದಾರೆ.
ಇತ್ತೀಚಿಗೆ ಪೊಲೀಸರು, ರಾತ್ರಿ 10 ಗಂಟೆ ಬಳಿಕ ಹೋಟೆಲ್ಗಳನ್ನು ಬಂದ್ ಮಾಡಿಸುತ್ತಿದ್ದರು. ಇದರಿಂದ ಹೋಟೆಲ್ಗಳಿಗೆ ನಷ್ಟ ಉಂಟಾಗಿತ್ತು. ಇನ್ನು ಕೊರೋನಾ ಸೋಂಕು ಬಳಿಕ ಹೋಟೆಲ್ಗಳಿಗೆ ಪೊಲೀಸರು ನಿರ್ಬಂಧ ಹೆಚ್ಚಾಯಿತು.
ಬಳಿಕ ಹೋಟೆಲ್ ಮಾಲೀಕರ ಸಂಘವು, ಇತ್ತೀಚಿಗೆ ನಗರ ಪೊಲೀಸ್ ಆಯುಕ್ತ ಸಿ.ಎಚ್ಪ್ರತಾಪ್ ರೆಡ್ಡಿ ಅವರನ್ನು ಭೇಟಿಯಾಗಿ 2016ರ ಆದೇಶದಂತೆ ರಾತ್ರಿ 1 ಗಂಟೆವರೆಗೆ ವಹಿವಾಟು ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಆಯುಕ್ತರು, ಹೋಟೆಲ್ಗಳನ್ನು ಅವಧಿ ಮುಂಚೆ ಬಂದ್ ಮಾಡದಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.