ಸಚಿವ ಕೆಜೆ ಜಾರ್ಜ್ ಪುತ್ರನಿಗೆ ಗುಡ್ ನ್ಯೂಸ್: ನುಗು ಅಭಯಾರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಹೈಕೋರ್ಟ್ ಅಸ್ತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾತ್ರಿ ಹೊತ್ತು ಜಮೀನಿಗೆ ತೆರಳೋದಕ್ಕೆ ಅರಣ್ಯ ರಸ್ತೆ ಬಳಸಲು ಇಂಧನ ಸಚಿವ ಕೆಜೆ ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ ಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ರಾತ್ರಿ ಹೊತ್ತು ತಮ್ಮ ಜಮೀನಿಗೆ ತೆರಳಲು ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಹಾದುಹೋಗಲು ಅನುಮತಿ ನೀಡುವಂತೆ ರಾಣಾ ಜಾರ್ಜ್ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ವನ್ಯಜೀವಿಗಳಿಗೆ ತೊಂದರೆಯಾಗದಂತೆ ಸಂಚಾರ ನಡೆಸುವಂತೆ ಆದೇಶಿಸಿದೆ.

ರಾಣಾ ಜಾರ್ಜ್‌ ಅವರ ಜಮೀನು, ಹೆಚ್‌ಡಿ ಕೋಟೆಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿದೆ. ಇಲ್ಲಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆ ಮಾರ್ಗ ಮೂಲಕ ರಾತ್ರಿ-ಹಗಲು ಓಡಾಡಲು ಅನುಮತಿ ಕೋರಲಾಗಿತ್ತು. ರಾತ್ರಿ, ಹಗಲು ಸಂಚಾರಕ್ಕೆ ಅನುಮತಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!