ವಾಹನ ಸವಾರಿಗೆ ಗುಡ್ ನ್ಯೂಸ್: ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ 50% ರಿಯಾಯಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು (Traffic Fine) ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್​ನಲ್ಲಿ ಇದ್ದರೆ ಸಾರಿಗೆ ಇಲಾಖೆ ಭರ್ಜರಿ ರಿಯಾಯಿತಿ ನೀಡುತ್ತಿದೆ.

ಶೇಕಡ 50ರ ತನಕ ರಿಯಾಯಿತಿಯನ್ನು ನೀಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದೆ.

ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರಾದ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಮನವಿ ಮಾಡಿಕೊಂಡಿದ್ದು, ಈ ಹಿನ್ನಲೆ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಫೆ 11ರೊಳಗೆ ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಮಾತ್ರ ಅನ್ವಯವಾಗಲಿದೆ. ಇದು ಸೀಮತ ಅವಧಿಯಲ್ಲಿ ನಡೆಯಲಿದೆ. ಈ ಮೂಲಕ ನಿಗದಿತ ದಿನಾಂಕದೊಳಗೆ ಟ್ರಾಫಿಕ್ ರೂಲ್ಸ್‌ ಉಲ್ಲಂಘನೆ ಮಾಡಿ ದಂಡವನ್ನು ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿರುವವರು ಮುಂದಿನ ಕಾನೂನಿನ ಕುಣಿಕೆಯಿಂದ ಬಚಾವ್‌ ಆಗಲು ಇದು ಸುವರ್ಣ ಅವಕಾಶವನ್ನು ನೀಡಿದೆ. ಫೆ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಮಾಡಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!