ಕೊಪ್ಪಳ ಜನತೆಗೆ ಸಿಹಿ ಸುದ್ದಿ: ಕೊನೆಗೂ ಬಲ್ದೋಟ ಕಾರ್ಖಾನೆಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೊಪ್ಪಳದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ವ್ಯಾಪಕ ಟೀಕೆಗಳು ಬರಲು ಶುರುವಾಗಿದ್ದು, ಇದರ ಬೆನ್ನಲ್ಲೇ ಕಾರ್ಖಾನೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ.

ಬಲ್ಡೋಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋರಾಟಗಾರರ ನಿಯೋಗ ಭೇಟಿಯಾಗಿತ್ತು. ಇದೀಗ ನಿಯೋಗದ ಮನವಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಕಾರ್ಖಾನೆ ಕೆಲಸ ನಿಲ್ಲಿಸಲು ಸೂಚನೆ ನೀಡಿದ್ದಾರೆ .

ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಉಕ್ಕಿನ ಕಾರ್ಖಾನೆ ವಿಸ್ತರಣೆಗೆ ಜಿಲ್ಲಾಡಳಿತ ಆರಂಭಿಸುವುದಕ್ಕೆ ಮುಂದಾಗಿತ್ತು. ಆದರೆ ಕೊಪ್ಪಳ ಜನತೆ ಇದೀಗ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!