ಇಂದು ರಾಜ್ಯದ ಈ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜ್ಯದ ಕರಾವಳಿ ಭಾಗದಲ್ಲಿ ಇಂದೂ ಕೂಡಾ ಮುಂಗಾರು ದುರ್ಬಲವಾಗಿಯೇ ಹೆಜ್ಜೆಯಿಡುತ್ತಾ ಸಾಗುತ್ತಿದೆ.
ಜೂ.20 ರ ಬಳಿಕ‌ ಒಂದಿಷ್ಟು ಚುರುಕಾಗುವ ಸಾಧ್ಯತೆಗಳಿದ್ದರೂ, ಭಾರೀ ಮಳೆಯ ನಿರೀಕ್ಷೆ ಮಾತ್ರ ಕ್ಷೀಣಿಸಿದೆ.
ಜೂ.15ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿ ಭಾಗಗಳಾದ ಕಾಸರಗೋಡು, ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ಒಂದೆರಡು ಕಡೆ ಚಾಮರಾಜನಗರ ಹಾಗೂ ಮೈಸೂರಿಗೆ ಹೊಂದಿರುವ ಭಾಗಗಳಲ್ಲಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಬೀದರ್, ಗುಲ್ಬರ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಇನ್ನು ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ನಿರೀಕ್ಷೆಯಿದ್ದರೆ, ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!