ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ವೇಳೆಗೆ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆಗೊಳಿಸಲು ಸಿದ್ದರಾಮಯ್ಯ ಸಜ್ಜಾಗಿದ್ದರೆಂದು ಕಾಣುತ್ತಿದೆ.
ರಾಜಕೀಯ ಕಾರಣಗಳಿಂದ ಸಿದ್ದರಾಮಯ್ಯನವರು ಆರು ವರ್ಷದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದಾರೆ.
ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ನಾಳೆ (ಭಾನುವಾರ) ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಿಎಂ ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ.
ಪ್ರಬಲ ರಾಜಕೀಯ ನಾಯಕರು ಆರು ವರ್ಷಗಳಿಂದ ಭೇಟಿಯಾಗಿರಲಿಲ್ಲ. ಮಾತುಕತೆ ಇರಲಿಲ್ಲ. ಚುನಾವಣಾ ಹೊಸ್ತಿಲಲ್ಲಿ ಪ್ರಸಾದ್ ಅವರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿದ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.