ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿಯಾಗಿ ಗೂಡ್ಸ್‌ ವಾಹನ ಚಾಲಕ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ಅಂಕೋಲಾ
ಕ್ಯಾಂಟರ್ ಲಾರಿಯೊಂದು ಟಾಟಾ ಇಂಟ್ರಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕ ಸ್ಥಳದಲ್ಲಿ ಮೃತ ಪಟ್ಟ ಘಟನೆ ತಾಲೂಕಿನ ಹೊನ್ನಾಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಹುಬ್ಬಳ್ಳಿ ಉಣಕಲ್ ನಿವಾಸಿ ಶಿವಕುಮಾರ್ ಶಂಕರಪ್ಪ ಪಟ್ಟಣಶೆಟ್ಟಿ (35) ಮೃತ ವ್ಯಕ್ತಿಯಾಗಿದ್ದು ಈತ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಸಾಗುತ್ತಿದ್ದ ಸಂದರ್ಭದಲ್ಲಿ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಲಾರಿ ಚಾಲಕ ಎದುರಿನಿಂದ ಬೇರೆ ವಾಹನವನ್ನು ಓವರ್ ಟೇಕ್ ಮಾಡಿ ಬಲಬಧಿಗೆ ಬಂದು ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ಚಾಲಕ ತೀವ್ರ ಸ್ವರೂಪದ ಗಾಯಗೊಂಡು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಪಘಾತ ಪಡಿಸಿದ ಲಾರಿ ಚಾಲಕ ನಾಪತ್ತೆಯಾಗಿದ್ದು ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!