ಹೊಸದಿಗಂತ ವರದಿ, ತುಮಕೂರು
ಪಾವಗಡ ಸಮೀಪದ ಕಣಿವೇನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ಗೂಡ್ಸ್ ವಾಹನ ಹಾಗೂ ಬೊಲೇರೋ ನಡುವೆ
ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಜಶೇಖರ (40) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ರಾಘವೇಂದ್ರ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ವ್ಯಕ್ತಿ ಹಾಗೂ ಗಾಯಾಳುಗಳು ಆಂಧ್ರಪ್ರದೇಶದ ಎಗುವ ರಾಮಗಿರಿ ಗ್ರಾಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ.
ಘಟನೆ ತಿಳಿದು ಪಾವಗಡ ಪೊಲೀಸ್ ಠಾಣೆಯ ಸಿ ಪಿ ಐ ಲಕ್ಷ್ಮಿಕಾಂತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ