August 19, 2026
Wednesday, August 19, 2026
spot_img

ಡಿವೈಡರ್‌ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಸ್ಥಳದಲ್ಲೇ ಐವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.

ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು. ಈ ಅಪಘಾತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !