ಅಮಿತ್ ಶಾ ವಿರುದ್ಧ ಗೂಂಡಾ ಪದಬಳಕೆ: ಚುನಾವಣಾ ಆಯೋಗದಿಂದ ಯತೀಂದ್ರ ಸಿದ್ದರಾಮಯ್ಯಗೆ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಪದಬಳಕೆ ಮಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪಶು ಸಂಗೋಪಾನ ಸಚಿವ ಕೆ ವೆಂಕಟೇಶ್ , ಯತೀಂದ್ರ ಅವರು ಅಮಿತ್ ಷಾ ವಿರುದ್ಧ ಗೂಂಡ ಹೇಳಿಕೆ ಹೇಳಿದ್ದಕ್ಕೆ ನೊಟೀಸ್ ಕೊಡಿಸಿದ್ದಾರೆ. ಯತೀಂದ್ರಗೆ ನೊಟೀಸ್ ಕೊಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇತ್ತೀಚಿಗೆ ಯತಿಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಗೂಂಡಾ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅಂತಹವರನ್ನು ಮೋದಿಯವರು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!