ಸಿಕ್ಕಿದೆ ಪ್ರವೀಣ್ ನೆಟ್ಟಾರು ಹಂತಕರ ಸುಳಿವು: ಎಡಿಜಿಪಿ ಅಲೋಕ್ ಕುಮಾರ್

ಹೊಸದಿಗಂತ ವರದಿ, ಮಂಗಳೂರು:

ಪ್ರವೀಣ್ ನೆಟ್ಟಾರು ಅವರನ್ನು ಯಾರು ಕೊಲೆ ಮಾಡಿರುವುದು ಎಂಬುದು ಗೊತ್ತಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಶೀಘ್ರವೇ ಅವರನ್ನು ಬಂಧಿಸಲಿದ್ದೇವೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ದ.ಕ. ಜಿಲ್ಲೆಯ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆ, ಬಂದೋಬಸ್ತ್ ಹಾಗೂ ಶಾಂತಿ ಸುವ್ಯವಸ್ಥೆ ಕುರಿತಂತೆ ಮಂಗಳೂರು ಕಮಿಷನರೇಟ್, ದ.ಕ. ಮತ್ತು ಉಡುಪಿ ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ಬಳಿಕ ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದರು.
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಾಲ್ಕು ಜನರನ್ನು ಬಂಧಿಸಲಾಗಿದೆ. ಮತ್ತೆ ಕೆಲವರ ವಿಚಾರಣೆ ನಡೆಯುತ್ತಿದೆ. ಉಳಿದ ಆರೋಪಿಗಳನ್ನು ಶೀಘ್ರ ಬಂಧಿಸುವ ಕೆಲಸವನ್ನು ಕರ್ನಾಟಕ ಪೊಲೀಸರು ಮಾಡಲಿದ್ದಾರೆ. ಪ್ರವೀಣ್ ಹತ್ಯೆಗೆ ಯಾರು ಪಿತೂರಿ ಮಾಡಿದ್ದು, ಎಲ್ಲಿ ಮಾಡಿದ್ದು ಎಂಬುದು ಗೊತ್ತಾಗಿದೆ. ಎನ್‌ಐಎ ಅಧಿಕಾರಿಗಳ ಜತೆಗೂ ಸಂಪರ್ಕದಲ್ಲಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!