ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡಿಗರು, ಕರ್ನಾಟಕದ ವಿರುದ್ಧ ಅವಾಚ್ಯ ನಿಂದನೆ ಮಾಡಿ ವಿಡಿಯೋ ಮಾಡಿದ್ದ ಮಹಾರಾಷ್ಟ್ರ ಮೂಲದ Instagrammer ಕೊನೆಗೂ ಕ್ಷಮೆ ಯಾಚಿಸಿದ್ದಾನೆ.
ಬೆಂಗಳೂರು ಪೊಲೀಸರು ಮತ್ತು ಮುಂಬೈ ಪೊಲೀಸರ ಎಚ್ಚರಿಕೆ ಬಳಿಕ Instagrammer ದೇವ್ ಶರ್ಮಾ ಇದೀಗ ವಿಡಿಯೋ ಮಾಡಿ ಕನ್ನಡಿಗರು ಮತ್ತು ಕರ್ನಾಟಕದ ಕ್ಷಮೆ ಯಾಚಿಸಿದ್ದಾನೆ.
ಈ ಕುರಿತು ವಿಡಿಯೋ ಮಾಡಿರುವ ದೇವ್ ಶರ್ಮಾ, ‘ಇಂದು ನನ್ನ ಮನೆಗೆ ಮಹಾರಾಷ್ಟ್ರ ಪೊಲೀಸರು ಬಂದಿದ್ದರು. ನನ್ನ ವಿಡಿಯೋಗಳ ಕುರಿತು ನನಗೆ ಅರಿವು ಮೂಡಿಸಿದರು. ಇದೀಗ ನನ್ನ ತಪ್ಪಿನ ಅರಿವು ನನಗಾಗಿದೆ. ಆ ವಿಡಿಯೋಗಳೆಲ್ಲವೂ ನಾನು ಕೋಪದಿಂದ ಮಾಡಿದ್ದು. ಇನ್ನು ಮುಂದೆ ಇಂತಹ ವಿಡಿಯೋಗಳನ್ನು ಮಾಡಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾನೆ.
The Instagrammer who hurt the sentiments of Karnataka and Kannadigas has now issued an apology after being approached by the police and instructed to correct his mistake. Thank you very much, @BlrCityPolice and @MumbaiPolice, for taking swift action to address this matter.
— Karnataka Portfolio (@karnatakaportf) October 29, 2024